ನಂದಿನಿ ಮೈಸೂರು
ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಚುನಾವಣೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳ ವಿಶೇಷ ಸಭೆ ಹಾಗೂ ಪಕ್ಷದಿಂದ ಸಾಂಪ್ರದಾಯಿಕ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮೈಸೂರು ಕಾಂಗ್ರೆಸ್ ಭವನದಲ್ಲಿ ಮೈಸೂರು ಜಿಲ್ಲಾ ಡಿಸಿಸಿ ಅಧ್ಯಕ್ಷರಾದ ಡಾ.ಬಿಜೆ ವಿಜಯ್ ಕುಮಾರ್ ,ಆರ್.ಮೂರ್ತಿ ನೇತೃತ್ವದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮೊದಲಿಗೆ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಜಯಗಳಿಸಿದ ಯುವ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನಂತರ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಅಭಿನಂದಿಸಲಾಯಿತು.