ನಂದಿನಿ ಮೈಸೂರು
“ಆಪರೇಷನ್ ಸಿಂಧೂರ” ಯಶ್ವಸಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಡಾ.ಈಸಿ.ನಿಂಗರಾಜ್ ಗೌಡ ಅಭಿನಂದನೆ ಸಲ್ಲಿಕೆ.
ಆಪರೇಷನ್ ಸಿಂಧೂರ (Operation Sindoor) ಎಂಬುದು ಭಾರತವು 2025ರ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಮೂಲಸೌಕರ್ಯಗಳನ್ನು ಗುರಿಯಾಗಿಸಿ ನಡೆಸಿದ ಸೈನಿಕ ಕಾರ್ಯಾಚರಣೆ. ಈ ಕಾರ್ಯಾಚರಣೆ, 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಕೈಗೊಂಡ ಕ್ರಮವಾಗಿತ್ತು. ಆ ದಾಳಿಯಲ್ಲಿ 26 ನಾಗರಿಕರು, ಅವರಲ್ಲಿ ಹೆಚ್ಚಿನವರು ಹಿಂದೂ ಪ್ರವಾಸಿಗರು, ಬಲಿಯಾಗಿದ್ದರು. ಈ ದಾಳಿಗೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ಶಾಖೆಯಾದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಹೊಣೆ ಹೊತ್ತಿತ್ತು . 
ಭಾರತವು ಈ ಕಾರ್ಯಾಚರಣೆಯಲ್ಲಿ ಒಟ್ಟು 9 ಉಗ್ರ ಶಿಬಿರಗಳನ್ನು ಗುರಿಯಾಗಿಸಿ 24 ಕ್ಷಿಪಣಿಗಳನ್ನು 25 ನಿಮಿಷಗಳ ಅವಧಿಯಲ್ಲಿ ಉಡಾಯಿಸಿತು. ಈ ಶಿಬಿರಗಳು ಲಷ್ಕರ್-ಎ-ತೊಯ್ಬಾ, ಜೈಷ್-ಎ-ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದೀನ್ ಸಂಘಟನೆಗಳಿಗೆ ಸೇರಿದ್ದವು. ಭಾರತದ ಪ್ರಕಾರ, ಈ ದಾಳಿಯಲ್ಲಿ ಸುಮಾರು 70 ಉಗ್ರರು ನಾಶವಾಗಿದ್ದಾರೆ . ಈ “ಆಪರೇಷನ್ ಸಿಂಧೂರ” ಯಶ್ವಸಿ ಕಾರ್ಯಚರಣೆಗೆ ಪ್ರಮುಖ ಕಾರಣಕರ್ತರಾದ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರಿಗೆ, ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವಿರಿಗೆ, ಗೃಹಮಂತ್ರಿ ಅಮಿತ್ ಶಾ ಅವರಿಗೆ, ಇದರ ನೇತೃತ್ವವಹಿಸಿದ್ದ ಎಲ್ಲಾ ಸೈನ್ಯದ ಮುಖ್ಯಸ್ಥರಿಗೆ, ಎಲ್ಲಾ ದೇಶಭಕ್ತ ಸೈನಿಕರಿಗೆ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಡಾ.ಈ.ಸಿ.ನಿಂಗರಾಜ್ ಗೌಡ ರವರು ಹೃದಯತುಂಬಿದ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆ ಭಾರತೀಯ ಸೇನೆಯು ಉಗ್ರರ ವಿರುದ್ಧ ಕೈಗೊಂಡ ಪ್ರಮುಖ ಕ್ರಮವಾಗಿದ್ದು, ಭಾರತವು ಉಗ್ರರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿರುವುದನ್ನು ಪ್ರತಿಬಿಂಬಿಸುತ್ತದೆ. ಈ ಕಾರ್ಯಾಚರಣೆಯನ್ನು ಭಾರತವೂ ಮುಂದುವರೆಸಿ ಪಾಕಿಸ್ತಾನದ ಎಲ್ಲಾ ಉಗ್ರಗಾಮಿ ಭಯೋತ್ಪಾದನೆ ತರಬೇತಿ ಶಿಬಿರಗಳನ್ನೂ ಸಂಪೂರ್ಣವಾಗಿ ನಾಶ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ವಿದೇಶಾಂಗ ನೀತಿಯ ಪರಿಣಾಮವಾಗಿ ವಿಶ್ವದ ಬಹುತೇಕ ದೇಶಗಳು ಭಾರತವನ್ನು ಬೆಂಬಲಿಸುತ್ತೀವೆ. ಇದರ ಸದುಪಯೋಗವನ್ನು ಭಾರತ ಪಡೆದು ಈ ಕೂಡಲೇ “ಪಾಕ್ ಆಕ್ರಮೀತ ಕಾಶ್ಮೀರ” (POK) ವನ್ನೂ ಸಂಪೂರ್ಣವಾಗಿ ವಶಪಡಿಸಿಕೊಳ್ಳಬೇಕೇಂದು ಡಾ.ಈ.ಸಿ.ನಿಂಗರಾಜ್ ಗೌಡ ರವರು ವಿನಯಪೂರ್ವಕವಾಗಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹರಿಯುವ ಸಿಂಧೂ, ರಾವಿ, ಝೇಲಮ್ ನದಿ ಸೇರಿದಂತೆ ಎಲ್ಲಾ ನದಿಗಳ ನೀರನ್ನೂ ಅಣೇಕಟ್ಟುಗಳನ್ನೂ ಕಟ್ಟುವುದರ ಮೂಲಕ ಸಂಪೂರ್ಣವಾಗಿ ಉಪಯೋಗಿಸಿಕೊಂಡು, ಆ ಎಲ್ಲಾ ನೀರನ್ನೂ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹರಿಯಾಣ, ರಾಜಸ್ಥಾನ, ಚಂಡೀಗಢ , ಹಿಮಾಚಲ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ಕೃಷಿ, ಕೈಗಾರಿಕೆಗೆ ಬಳಸುವಂತೆ ಕೇಂದ್ರ ಸರ್ಕಾರವೂ ತ್ವರೀತವಾಗಿ ಕಾರ್ಯೋನ್ಮಖವಾಗಬೇಕೇಂದು ಡಾ.ಈ.ಸಿ.ನಿಂಗರಾಜ್ ಗೌಡರವರು ವಿನಂತಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಯವರ ಹೇಳಿಕೆಗೆ ಡಾ.ಈ.ಸಿ.ನಿಂಗರಾಜ್ ಗೌಡ ಖಂಡನೆ.
ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ಪಹಲ್ಗಾಮ್ ದಾಳಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಆ ದಾಳಿಯ 3 ದಿನ ಮೊದಲೇ ಗೋತ್ತೀತ್ತು ಎಂದು ಆಧಾರರಹಿತ ಕೀಳುಮಟ್ಟದ ಹೇಳಿಕೆ ನೀಡಿರುವುದನ್ನೂ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಡಾ.ಈ.ಸಿ.ನಿಂಗರಾಜ್ ಗೌಡ ರವರು ತೀವ್ರವಾಗಿ ಖಂಡಿಸಿದ್ದಾರೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರೇ ಈ ರೀತಿಯ ಭಾಲಿಶ ಹೇಳಿಕೆ ನೀಡಿದರೆ, ಆ ಪಕ್ಷದ ಇನ್ನೀತರ ಕಾರ್ಯಕರ್ತರ ಮನಸ್ಥಿತಿ ಇನ್ನೂ ಯಾವ ರೀತಿ ಇರಲೂ ಸಾಧ್ಯ ಎಂದು ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ನರೇಂದ್ರ ಮೋದಿಯವರ ಸರ್ಕಾರ ಬಾಲಕೋಟ್, ಉರಿ ದಾಳಿ ನಡೆಸಿದಾಗಲೂ ಕಾಂಗ್ರೇಸ್ ಪಕ್ಷವೂ ಪದೇಪದೇ ಸಾಕ್ಷಿಯನ್ನೂ ಕೇಳುತ್ತೀತ್ತು. ಈಗ ಆಪರೇಷನ್ ಸಿಂಧೂರಕ್ಕೆ ಪಾಕಿಸ್ಥಾನವೇ ಸಾಕ್ಷಿಯನ್ನೂ ನೀಡುತ್ತೀದೆ. ಈಗಲಾದರೂ ಕಾಂಗ್ರೇಸ್ ಪಕ್ಷಕ್ಕೆ ಭಾರತದ ಸೈನ್ಯದ ಮೇಲೆ ನಂಬಿಕೆ ಬರಬಹುದು ಎಂದು ಡಾ.ಈ.ಸಿ. ನಿಂಗರಾಜ್ ಗೌಡ ರವರು ತಿಳಿಸಿದ್ದಾರೆ.
ವಂದನೆಗಳೊಂದಿಗೆ,
ಡಾ.ಈ.ಸಿ.ನಿಂಗರಾಜ್ ಗೌಡ,
ಸಿಂಡಿಕೇಟ್ ಮಾಜಿ ಸದಸ್ಯರು,
ಮೈಸೂರು ವಿಶ್ವವಿದ್ಯಾನಿಲಯ.
ಮೊಬೈಲ್ : 9980184789 9342184789