ದಸರಾ ಆನೆಗಳಿಗೆ ಕುಶಾಲತೋಪು ತಾಲೀಮು

ನಂದಿನಿ ಮೈಸೂರು

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕುಶಾಲತೋಪು ಸಿಡಿಸಲು ಗಜಪಡೆ ಹಾಗೂ ಅಶ್ವಾರೋಹಿ ಪಡೆಯನ್ನು ಒಗ್ಗಿಸಲು ಮೊದಲ ಹಂತದ ತಾಲೀಮು ಇಂದು ನಡೆಯಿತು.

ಮೈಸೂರು ಅರಮನೆಯ ವರಹಾ ದ್ವಾರದ ಕೋಟೆ ಮಾರಮ್ಮ ದೇಗುಲದ ಸಮೀಪ  ತಾಲೀಮು ನಡೆಯಿತು.
ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ 7 ಫಿರಂಗಿ ಗಾಡಿಗಳಿಂದ ಒಟ್ಟು 21 ಬಾರಿ ಕುಶಾಲತೋಪು ಸಿಡಿಸುವ ಅಭ್ಯಾಸ ಮಾಡಲಾಯಿತು.

7 ಪಿರಂಗಿಗಳ ಮೂಲಕ ಮೂರು ಸುತ್ತಿನ ತಾಲೀಮು ನಡೆದಿದ್ದು,ತಾಲೀಮಿನಲ್ಲಿ 43 ಕುದುರೆಗಳು, ಚಿನ್ನದ ಅಂಬಾರಿ ಹೊರವ ಅಭಿಮನ್ಯು ನೇತೃತ್ವದ 14 ಆನೆಗಳು ಭಾಗಿಯಾಗಿತ್ತು.ಕುಶಾಲತೋಪು ಸಿಡಿಸುತ್ತಿದ್ದಂತೆ  ಕುದುರೆಗಳು ಬೆಚ್ಚಿ ಬಿದ್ದವು.ಕುದುರೆ ಅಡ್ಡಾದಿಡ್ಡಿ ಓಡಾಡಿದ್ದರಿಂದ ಆನೆಗಳು ಗಲಿಬಿಲಿಗೊಂಡಿತು.
ಕುಶಾಲ ತೋಪು ಸಿಡಿಸುವ ತಾಲೀಮು ಒಂದು ಗಂಟೆಗಳ ಕಾಲ ನೆರವೇರಿತು.ಪೋಲಿಸರು, ಅಶ್ವಾರೋಹಿ ದಳ, ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ನೂರಾರು ಜನ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *