ದಸರಾ ವಸ್ತು ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ನಂದಿನಿ ಮೈಸೂರು

*ದಸರಾ ವಸ್ತು ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ*

ಮೈಸೂರು ದಸರಾ ಅಂಗವಾಗಿ ಆಯೋಜಿಸಿರುವ ವಸ್ತು ಪ್ರದರ್ಶನ ಕಾರ್ಯ ಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಮಾಡಿ, ಟೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದವರು ಪ್ರತಿಬಾರಿಯಂತೆ ಈ ಬಾರಿಯೂ ಕೂಡ ವಿವಿಧ ಭಾಗಗಳಿಂದ ಬಂದು ವಸ್ತು ಪ್ರದರ್ಶನ ವಿಭಾಗದಲ್ಲಿ ವಿವಿಧ ಕಲಾಕೃತಿಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತು ಅನಾವರಣಗೊಳಿಸಲಾಗಿದೆ ಸಾರ್ವಜನಿಕರು ಬಂದು ಪ್ರತಿಯೊಂದನ್ನು ವೀಕ್ಷಿಸಿ, ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್ ಮತ್ತು ವಿವಿಧ ಶಾಸಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *