ತಿರಂಗ ಬಣ್ಣದ ಹೂವಿನಿಂದ ಕಂಗೊಳಿಸಿದ ಶ್ರೀ ರಾಘವೇಂದ್ರ ಸ್ವಾಮಿ

ಮೈಸೂರು:15 ಆಗಸ್ಟ್ 2022

ನಂದಿನಿ ಮೈಸೂರು

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಯರಿಗೆ ಪ್ರದ್ಯುಮ್ನ ಅವರ ತಂಡದಿಂದ ರಾಷ್ಟ್ರಧ್ವಜ ಬಣ್ಣದ ಹೂವಿನಿಂದ ಅಲಂಕರಿಸಲಾಯಿತು.

ಶ್ರೀಮಠದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ರಾಯರ ದರ್ಶನ ಪಡೆದು ಕೃತಾರ್ಥರಾದರು. ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು ಎಂದು ಶ್ರೀಮಠದ ವ್ಯವಸ್ಥಾಪಕರಾದ ರಾಘವೇಂದ್ರ ಕುಲಕರ್ಣಿ ತಿಳಿಸಿದರು.

Leave a Reply

Your email address will not be published. Required fields are marked *