ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್

ನಂದಿನಿ ಮೈಸೂರು

*ತುಂಗಾ ಹಾಸ್ಟೆಲ್ ಬಾಯ್ಸ್ ಹವಾ…ಮೂರನೇ ವಾರವೂ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್*

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಥಿಯೇಟರ್ ಅಂಗಳದಲ್ಲಿ ತುಂಗಾ ಹಾಸ್ಟೆಲ್ ಬಾಯ್ಸ್ ಓಟ ಮುಂದುವರೆದಿದೆ. ಮೂರನೇ ವಾರವೂ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ವಿಭಿನ್ನ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಮಾಡಿ ಗೆದ್ದಿರುವ ಚಿತ್ರತಂಡಕ್ಕೆ ನಟಿ ಕಂ ನಿರೂಪಕಿ ಅನುಶ್ರೀ ಸಾಥ್ ಕೊಟ್ಟಿದ್ದಾರೆ. ಕಳೆದ ಭಾನವಾರ ವೀರೇಶ್ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಅನುಶ್ರೀ ಟಿಕೆಟ್ ವಿತರಿಸಿದರು. ಅಭಿಮಾನಿಯಾಗಿ ಈ ಸಿನಿಮಾದ ಸಕ್ಸಸ್ ಸೆಲೆಬ್ರೇಟ್ ಮಾಡುವುದಾಗಿ ತಿಳಿಸಿದರು.

ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಮಾತನಾಡಿ, ನಮ್ಮ ಸಿನಿಮಾ ಗೆಲ್ಲೋದಿಕ್ಕೆ ಕಾರಣ ರಿಪೀಟ್ ಆಡಿಯನ್ಸ್. ಡೈಲಾಗ್ ಮಿಸ್ ಆಗಿದ್ದಕ್ಕೆ ಸುಮಾರು ಜನ 2-3 ಬಾರಿ ನೋಡಿದ್ದಾರೆ. ನಮಗೆ ಫಸ್ಟ್ 2 ವೀಕ್ ಸೇರಿ 12 ಲಕ್ಷ ಜನ ನೋಡಿದ್ದಾರೆ. ಇನ್ನೂ 20 ಲಕ್ಷ ಜನ ನೋಡ್ತಾರೆ ಎಂಬ ಭರವಸೆ ಇದೆ. ಹೊಸ ಸಿನಿಮಾಗೆ ಅದ್ಭುತ ರೆಸ್ಪಾನ್ಸ್. ಅಪ್ಪು ಸರ್ ಆಶೀರ್ವಾದ, ಇಡೀ ತಂಡದ ಎಫರ್ಟ್ ಗೆ ಸಿನಿಮಾ ಹೌಸ್ ಫುಲ್ ಓಡುತ್ತಿದೆ. ಬುಕ್ ಮೈ ಶೋ ನಲ್ಲಿ 2 ಟಿಕೆಟ್ ತೆಗೆದುಕೊಂಡರೆ 1 ಉಚಿತವಾಗಿ ಕೊಡುತ್ತಿದ್ದೇವೆ ಎಂದರು.

ನಿರ್ಮಾಪಕ ವರುಣ್ ಗೌಡ ಮಾತನಾಡಿ, ನಮ್ಮ ಸಿನಿಮಾ ತುಂಬಾ ಚೆನ್ನಾಗಿ ಓಡುತ್ತಿದೆ. ಈ ಚಿತ್ರ ಶುರು ಮಾಡಲು ಕಾರಣ ಅಪ್ಪು ಸರ್. ಅವರ ಆಶೀರ್ವಾದದಿಂದ ಶುರು ಮಾಡಿದ್ದು, ಅವರ ಆಶೀರ್ವಾದಿಂದ ಚಿತ್ರ ತುಂಬಾ ಚೆನ್ನಾಗಿ ಹೋಗುತ್ತಿದೆ. ಪರವಃ, ಜೀ ಸ್ಟುಡಿಯೋಸ್ ಧನ್ಯವಾದ ಎಂದರು.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆಗೆ ಚಿತ್ರತಂಡ ಖುಷಿಯಾಗಿದೆ. ಇದೇ ಕಾರಣಕ್ಕೆ ಮತ್ತಷ್ಟು ಜನ ಸಿನಿಮಾ ನೋಡಲಿ ಎನ್ನುವ ಕಾರಣ ಫ್ರೀ ಟಿಕೆಟ್ ಆಫರ್ ಕೊಡುತ್ತಿದೆ. ಆಗಸ್ಟ್ 7ರ ಮಧ್ಯಾಹ್ನದಿಂದ ಗುರುವಾರ ಸಂಜೆಯವರೆಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ 2 ಟಿಕೆಟ್ ಖರೀದಿಸಿದರೆ ಒಂದು ಟಿಕೆಟ್ ಫ್ರೀ ಕೊಡಲಾಗುತ್ತಿದೆ. “ಇಡೀ ಥಿಯೇಟರ್ ತುಂಬ್ಕೊಂಡು ಎಲ್ಲರೂ ನಗಾಡ್ಕೊಂಡು ತೇಲಾಡ್ಕೊಂಡು ಖುಷಿಖುಷಿಯಾಗಿ ಇರ್ಬೇಕು ಅಂತ ನಮ್ ಆಸೆ” ಎಂದು ಚಿತ್ರತಂಡ ಹೇಳಿದೆ.

 

ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಕನಸ್ಸಿಗೆ ಹೊರ ರಾಜ್ಯ ಹಾಗೂ ವಿದೇಶಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ವರುಣ್ ಗೌಡ, ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ.ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸಾಥ್ ಕೊಟ್ಟಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ.

Leave a Reply

Your email address will not be published. Required fields are marked *