ಕೆಪಿಸಿಸಿ ಕಾರ್ಯದರ್ಶಿಯಾಗಿದ್ದ ಗುರುಪಾದಸ್ವಾಮಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರಿದ್ದು ಆನೆಬಲ: ಬಿ.ವೈ.ವಿಜಯೇಂದ್ರ

ನಂದಿನಿ ಮೈಸೂರು

ಕೆಪಿಸಿಸಿ ಕಾರ್ಯದರ್ಶಿಕಾಗಿದ್ದ
ಗುರುಪಾದಸ್ವಾಮಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರಿಕೊಂಡಿದ್ದಾರೆ.

ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಗುರುಪಾದಸ್ವಾಮಿ ರವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರು ಬಿಜೆಪಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರ ಮಾತನಾಡಿ ಕಾಂಗ್ರೆಸ್ ನ ಹಿರಿಯ ಮುಖಂಡರು ಕೆಪಿಸಿಸಿ ಕಾರ್ಯದರ್ಶಿಯಾದ ಗುರುಪಾದಸ್ವಾಮಿರವರು ಕಾಂಗ್ರೆಸ್ ಪಕ್ಷ ಬಿಟ್ಟು ಪ್ರದಾನಿ ನರೇಂದ್ರ ಮೋದಿರವರ ಬಿಜೆಪಿ ಪಕ್ಷದ ಕಾರ್ಯವೈಖರಿ ನೋಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಆನೆ ಬಲ ಬಂದಂತಾಗಿದೆ.ಗುರುಪಾದಸ್ವಾಮಿ ರವರ ಜೊತೆ ಅವರ ಅಪಾರ ಬೆಂಬಲಿಗರು ಬಿಜೆಪಿ ಸೇರ್ಪಡೆಯಾಗಿದ್ದು ಖುಷಿ ತಂದಿದೆ. ಗುರುಪಾದಸ್ವಾಮಿ ರವರು ಯಾವುದೇ ಬೇಡಿಕೆ ಇಲ್ಲದೇ ಪಕ್ಷಕ್ಕೆ ಆಗಮಿಸಿದ್ದಾರೆ.
ಮೈಸೂರು-ಕೊಡಗು, ಮಂಡ್ಯ ಮತ್ತು ಚಾಮರಾಜನಗರ ಮೂರೂ ಕ್ಷೇತ್ರಗಳನ್ನು ನಾವು ನಿರಾಯಾಸವಾಗಿ ಗೆಲ್ಲುತ್ತೇವೆ ಎಂದರು.

Leave a Reply

Your email address will not be published. Required fields are marked *