ಕನ್ನಡ ಸಾಹಿತ್ಯ ಪರಿಷತ್ತಿ 109ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಹಿರಿಯ ಸಾಹಿತಿಗಳಿಗೆ ಸನ್ಮಾನ,ಕವಿಗೋಷ್ಠಿ,ಗೀತಗಾಯನ ಕಾರ್ಯಕ್ರಮ

ನಂದಿನಿ ಮೈಸೂರು

ಕನ್ನಡ ಸಾಹಿತ್ಯ ಪರಿಷತ್ತಿ 109ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಹಿರಿಯ ಸಾಹಿತಿಗಳಿಗೆ ಸನ್ಮಾನ,ಕವಿಗೋಷ್ಠಿ,ಗೀತಗಾಯನ ಕಾರ್ಯಕ್ರಮ ಜರುಗಿತು.

ಮೈಸೂರಿನ ವಿಜಯನಗರದಲ್ಲಿರುವ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಮೈ ವಿವಿ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಪ್ರೋ.ಸಿ.ಪಿ.ಸಿದ್ಧಶ್ರಮ ಸೇರಿದಂತೆ ವೇದಿಕೆ ಗಣ್ಯರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಹಿರಿಯ ಸಾಹಿತಿಗಳಾದ ಪ್ರೊ.ಎಸ್.ರಾಮಪ್ರಸಾದ್ ,ಟಿ.ಎನ್.ನಾಗರತ್ನ,ಸಿ.ಚಾಮಶೆಟ್ಟಿ,ಇಂದಿರಾ ಪಾಟೀಲ್ ರವರಿಗೆ ಸನ್ಮಾನಿಸಲಾಯಿತು.

ನಂತರ ಕವಿ ಮಿತ್ರರಿಂದ ಕವಿಗೋಷ್ಠಿ,ಕನ್ನಡ ಗೀತ ಗಾಯನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಕ.ಸಾ.ಪ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್,ಪ್ರೋ.ವಿಜಯಕುಮಾರಿ ಎಸ್.ಕರೀಕಲ್,
,ಮ.ನ.ಲತಾಮೋಹನ್ ಸೇರಿದಂತೆ ಇತರರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *