ಮಸೀದಿ ತೆರವು ಮಾಡಿ. ಹನುಮ ದೇವಸ್ಥಾನ ಕಟ್ಟಬೇಕು ಹೇಳಿಕೆಗೆ ಈಗಲೂ ನಾನು ಬದ್ದ:ರಿಷಿಕುಮಾರ ಸ್ವಾಮೀಜಿ

 

ಮೈಸೂರು:28 ಜನವರಿ 2022
ನಂದಿನಿ ಮೈಸೂರು

ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ.
ಹನುಮ ದೇವಸ್ಥಾನ ಕಟ್ಟಬೇಕು ಹೇಳಿಕೆಗೆ ಈಗಲೂ ನಾನು ಬದ್ದ.ಅಲ್ಲಿ ನನ್ನ ಹನುಮನ ದೇವಸ್ಥಾನ ಕಟ್ಟಲೇ ಬೇಕು ಎಂದು ಮೈಸೂರಿನಲ್ಲಿ ರಿಷಿ ಕುಮಾರ ಸ್ವಾಮೀಜಿ ಒತ್ತಾಯಿಸಿದರು.

ಇದು ಕೇವಲ ಶ್ರೀರಂಗಪಟ್ಟಣ ಮಾತ್ರವಲ್ಲ.
ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ.
ನಾನು ಒಬ್ಬನೇ ಹೋಗುತ್ತೇನೆ. ಗುಂಪಿನ ಜೊತೆ ಹೋಗುವುದಿಲ್ಲ.ಲಂಕೆಯನ್ನು ಸುಟ್ಟಿದ್ದು ಒಬ್ಬನೇ ಹನುಮ .ಆಜಾನ್ ಕೂಗುವ ಲೌಡ್ ಸ್ಪೀಕರ್‌ಗಳನ್ನು ತೆಗೆದು ಹಾಕಬೇಕು.ಈ ಸಂಬಂಧ ಈಗಾಗಲೇ ಹೋರಾಟ ಆರಂಭಿಸಿದ್ದೇನೆ.ನಿಮ್ಮ ಬೆದರಿಕೆ ಕೈ ಕಡಿಯುತ್ತೇವೆ ಕಾಲು ಕಡಿಯುತ್ತೇಗೆ ಹೆದರುವುದಿಲ್ಲ.ಈ ರೀತಿ ಹೇಳುವುದು ಪ್ರಚೋದನೆ.ರಾಜ್ಯ ಸರ್ಕಾರ ದೇವಸ್ಥಾನ ಒಡೆದು‌ ಮಸೀದಿ ಕಟ್ಟಿರುವುದನ್ನು ಪತ್ತೆ ಹಚ್ಚಬೇಕು.ಈ ರೀತಿಯ ದೇಗುಲಗಳನ್ನು ನಾವು ಪತ್ತೆ ಹಚ್ಚುತ್ತೇವೆ.ಅದಕ್ಕಾಗಿ ಸಮಿತಿ ರಚಿಸಿ ನಮಗೆ ರಕ್ಷಣೆ ಕೊಡಬೇಕು ಎಂದು ಮನವಿ ಮಾಡಿದರು

Leave a Reply

Your email address will not be published. Required fields are marked *