ಯುವಕನ ಬರ್ಬರ ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಆರ್.ಚೇತನ್ ಭೇಟಿ, ಪರಿಶೀಲನೆ

ಮೈಸೂರು:18 ಡಿಸೆಂಬರ್ 2021

ನಂದಿನಿ

ಮೈಸೂರಿನ ರಮ್ಮನಹಳ್ಳಿಯಲ್ಲಿ ಯುವಕನ ಬರ್ಬರ ಕೊಲೆ ನಡೆದ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಆರ್.ಚೇತನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅರ್ಜುನ್ ಎಂಬ ಯುವಕನನ್ನ ದುಷ್ಕರ್ಮಿಗಳು ಕೊಲೆ ಮಾಡಿದ್ದರು.ರಾತ್ರಿ ವೇಳೆ ಮನೆಯಲ್ಲಿದ್ದ ಅರ್ಜುನ್ ನನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕರೆಸಿ ಹತ್ಯೆಗೈದಿದ್ದರು.ಘಟನೆ ಬಗ್ಗೆ ಮೃತನ ಪೋಷಕರಿಂದ ಆರ್. ಚೇತನ್ ಮಾಹಿತಿ ಕಲೆ ಹಾಕಿದ್ದಾರೆ.

Leave a Reply

Your email address will not be published. Required fields are marked *