ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ , ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಆದೇಶ ಪ್ರತಿ ವಿತರಣಾ ಸಮಾರಂಭ

 

ನಂದಿನಿ ಮೈಸೂರು

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ , ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಆದೇಶ ಪ್ರತಿ ವಿತರಣಾ ಸಮಾರಂಭ ಏರ್ಪಡಿಸಲಾಗಿತ್ತು.

ಜಯಲಕ್ಷ್ಮೀಪುರಂ ನಲ್ಲಿರುವ ಮಹಾಜನ ಪ್ರೌಢಶಾಲೆಯ ಸುಬ್ಬಲಕ್ಷ್ಮೀ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಆದೇಶ ಪ್ರತಿಯನ್ನು ಮಹಾನಗರ ಪಾಲಿಕೆ ಸದಸ್ಯೆ ಭಾಗ್ಯ ಮಾದೇಶ್ ರವರು ವಿತರಿಸಿದರು.

ನಂತರ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣ ಹಾಗೂ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಆರ್.ಶ್ರೀಪಾಲ್ ರವರು ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡರಾದ ಕೃಪಾ,ಕೃಷ್ಣ,
ಪಡುವಾರಹಳ್ಳಿ ಪಾಪಣ್ಣ,
ಮಹಾಜನ ಫ್ರೌಢಶಾಲೆಯ ಮುಖ್ಯೋಪಾಧ್ಯಾಯ ಬೀರೇಗೌಡ,ನಿವೃತ್ತ ದೈಹಿಕ ಶಿಕ್ಷಕರಾದ ಎನ್.ಕೃಷ್ಣಮೂರ್ತಿ, ರವಿನಾಯಕ್,ರಮೇಶ್,ಮಹೇಶ್, ಸೇರಿದಂತೆ ಶಾಲೆಯ ಶಿಕ್ಷಕ ವೃಂದ, ವಿಧ್ಯಾರ್ಥಿಗಳು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *