ರಾಜ್ಯ ಮಟ್ಟದ ಬ್ರಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ ಪಂದ್ಯಾವಳಿ ಯಲ್ಲಿ ಚಾಂಪಿಯನ್ ಆದ ಬೆಂಗಳೂರು ನಗರ ಪತ್ರಕರ್ತರು

ನಂದಿನಿ ಮೈಸೂರು

ರಾಜ್ಯ ಮಟ್ಟದ ಬ್ರಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ ಪಂದ್ಯಾವಳಿ ಯಲ್ಲಿ ಚಾಂಪಿಯನ್ ಆದ ಬೆಂಗಳೂರು ನಗರ ಕಾರ್ಯನಿರತ ಪತ್ರಕರ್ತರ ಸಂಘ.

ಮಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯು ಡಬ್ಲ್ಯುಜೆ ರಾಜ್ಯಮಟ್ಟದ ಬ್ರಾಂಡ್ ಮಂಗಳೂರು ರೋಹನ್ ಕಪ್ -2024 ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಂಗಳೂರು ನಗರ ಕಾರ್ಯನಿರತ ಪತ್ರಕರ್ತರ ಸಂಘ ಚಾಂಪಿಯನ್ ಆಗಿದೆ.

ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ಸ್ಮರಣೆ ಯೊಂದಿಗೆ ನಡೆದ ಪಂದ್ಯಾವಳಿಯಲ್ಲಿ ಹಾಸನ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ
ಹಾಗೂ ಮಂಡ್ಯ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ತೃತೀಯ ಪ್ರಶಸ್ತಿ ಪಡೆದಿದೆ.ಮುಂಬಯಿ ಸೇರಿದಂತೆ ಒಟ್ಟು 24 ತಂಡಗಳು ಭಾಗಿಯಾಗಿದ್ದವು.

ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾ ವಿಪಕ್ಷನಾಯಕ ಆರ್.ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜು, ಬಿ.ರಮಾನಾಥ ರೈ,ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವಶುಭ ಹಾರೈಸಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಶಾಸಕ ಹರೀಶ್ ಪೂಂಜಾ, ವಿಪ ಸದಸ್ಯ ಡಾ.ಮಂಜುನಾಥ ಭಂಡಾರಿ, ದ.ಕ ಜಿಲ್ಲಾಧಿಕಾರಿ ಮುಲೈಮುಗಿಲನ್, ದ.ಕ.ಜಿಲ್ಲಾ ಕಾನಿಪ ಸಂಘದ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್‌ ಇಂದಾಜೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *