ಸಿಎಂ ಮನೆ ಮುಂದೆ ಅನ್ನದಾತರ ಪ್ರತಿಭಟನೆ,ಪ್ರತಿಭಟನೆಗೆ ಅವಕಾಶ ನೀಡದ ಪೋಲೀಸರು

ನಂದಿನಿ ಮೈಸೂರು

ವಿವಿಧ ಬೇಡಿಕೆ ಆಗ್ರಹಿಸಿ ರೈತರು ಮುಖ್ಯಮಂತ್ರಿಗಳಾದ
ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಮುಂದಾಳತ್ವದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು.
ಮೈಸೂರಿನ ಟಿಕೆ ಬಡಾವಣೆಯಲ್ಲಿರುವ ಸಿಎಂ ಸಿವಾಸದ ಬಳಿ ರೈತರು ಹೋರಾಟಕ್ಕೆ ಆಗಮಿಸುತ್ತಿದ್ದಂತೆ ಪೋಲೀಸರು ಪ್ರತಿಭಟನೆಗೆ ಅವಕಾಶ ಕೊಡದೇ ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಯಲ್ಲಿ ಮಹಿಳಾ ರೈತರು ಭಾಗಿಯಾದ್ದರು.
ರೈತ ಮಹಿಳೆಯರು ಸೇರಿದಂತೆ ನೂರಾರು ರೈತರನ್ನು ಪೋಲಿಸರು ಬಂಧಿಸುತ್ತಿದ್ದರು.
ಪೋಲಿಸರು ರೈತರ ನಡುವೆ ಮಾತಿನ ಚಕಮಕಿ ನಡೆಯಿತು.
ಪೋಲಿಸರ ನಡೆಗೆ ರೈತರ ಆಕ್ರೋಶ ಹೊರ ಹಾಕಿದರು.
ಪ್ರತಿಭಟನೆಗೆ ಸ್ವಲ್ಪ ಸಮಯವನ್ನು ಅವಕಾಶ ಮಾಡಿಕೊಡದ ಪೋಲಿಸರ ವಿರುದ್ಧ ರೈತರು ಕಿಡಿಕಾರಿದರು.

Leave a Reply

Your email address will not be published. Required fields are marked *