ನಂದಿನಿ ಮೈಸೂರು
ಪೋಲಿಸರ ನಿದ್ದೆಗೆಡಿಸಿದ್ದ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನ 11ದಿನಗಳ ನಂತರ ಮೈಸೂರು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ
ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಟಿ ನಡೆಸಿ ಸ್ಯಾಂಟ್ರೋ ರವಿ ಬಂಧನದ ಬಗ್ಗೆ ಮಾಹಿತಿ ನೀಡಿದರು.
ಗುಜರಾತ್ ನ ಅಹಮದಾಬಾದ್ ನಲ್ಲಿ ಮಂಜುನಾಥ್ ಕೆ ಎಸ್ @ ಸ್ಯಾಂಟ್ರೋರವಿ (51),
ರಾಮ್ ಜೀ (45), ಸತೀಶ್ ಕುಮಾರ್ (35) ರವರನ್ನೂ ಸಹ ಬಂಧಿಸಲಾಗಿದೆ.
ಮೈಸೂರು ನಗರ ಪೊಲೀಸರು ಗುಜರಾತ್ ಪೊಲೀಸರ ಸಹಕಾರದೊಂದಿಗೆ ಸ್ಯಾಂಟ್ರೋರವಿಯನ್ನ ಇಂದು ಬಂಧಿಸಿದ್ದಾರೆ.ಸ್ಯಾಂಟ್ರೋ ರವಿ ಪತ್ನಿ ಜ.2ರಂದು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.
ದೂರು ದಾಖಲಾದ ಮೇಲೆ ತಮಿಳುನಾಡು, ಆಂಧ್ರ,ಕೇರಳ ಸೇರಿದಂತೆ ಇತರೇ ರಾಜ್ಯಗಳಲ್ಲಿ ಸಂಚರಿಸಿದ್ದಾನೆ.
ಪೊಲೀಸರಿಂದ ತಪ್ಪಿಸಿಕೊಳ್ಳೊಕೆ ಮೊಬೈಲ್, ಸೀಮ್ ಬದಲಾವಣೆ ಮಾಡಿದ್ದಾನೆ.
ಸ್ಥಳ ಬದಲಾವಣೆ ಮಾಡಿದ್ದಾನೆ.
ವಾಹನಗಳ ಬದಲಾವಣೆ ಮಾಡಿದ್ದಾನೆ.ಪರಾರಿಯಾದ ನಂತರ ಗುರುತು ಬದಲಿಸಿಕೊಂಡಿದ್ದ.ಮೀಸೆ ಬೋಳಿಸಿ ವಿಗ್ ತೆಗೆದು ಹಾಕಿ ತಲೆಮರೆಸಿಕೊಂಡಿದ್ದ ಇಂದು ಆತನನ್ನ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಈಗ ಗುಜರಾತ್ ನ್ಯಾಯಾಲಯದಲ್ಲಿ ಹಾಜರು ಪಡಿಸಿ ಅವರ ಅನುಮತಿ ಪಡೆದು ರಾಜ್ಯಕ್ಕೆ ಕರೆದುಕೊಂಡು ಬರುತ್ತೇವೆ.ಪತ್ತೆಗಾಗಿ
ವಿವಿಧ ಪೋಲಿಸ್ ತಂಡಗಳು ರಚಿಸಲಾಗಿತ್ತು.ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಶ್ಲಾಘಿಸುತ್ತೇನೆ ಎಂದರು.ಅದಲ್ಲದೇ ನಾಳಿದ್ದು ಸ್ಯಾಂಟ್ರೋ ರವಿಯನ್ನ ಮೈಸೂರು ನ್ಯಾಯಾಲಯಕ್ಕೆ ಕರೆತರುವುದಾಗಿ ಅಲೋಕ್ ಕುಮಾರ್ ತಿಳಿಸಿದರು.
ವಿವಾಹಿತ ಎಂಬುದನ್ನು ಮುಚ್ಚಿಟ್ಟು, ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ ಮದುವೆಯಾಗಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ, ವರದಕ್ಷಿಣೆ ಕಿರುಕುಳ ನೀಡಿ, ಸುಳ್ಳು ಪ್ರಕರಣ ದಾಖಲಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿತ್ತು.
ನಗರದ ಸಂತ್ರಸ್ತ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರು ಒಡನಾಡಿ ಸೇವಾ ಸಂಸ್ಥೆಯ ನೆರವು ಪಡೆದು ದೂರು ದಾಖಲಿಸಿದ್ದರು.
ವರದಕ್ಷಿಣೆ ನಿಷೇಧ ಕಾಯ್ದೆ, ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ, ಐಪಿಸಿ 506 (ಉದ್ದೇಶಪೂರ್ವಕ ಅವಹೇಳನ, ಮನಶಾಂತಿ ಕೆಡಿಸುವ ಪ್ರಯತ್ನ), 504 (ಕ್ರಿಮಿನಲ್ ಪಿತೂರಿ), 376 (ಅತ್ಯಾಚಾರ), 270 (ಪ್ರಾಣಹಾನಿಕರವಾದ ಸೋಂಕು ಹರಡುವ ಯತ್ನ), ಬಲವಂತದ ಗರ್ಭಪಾತ (313) ಹಾಗೂ 323 (ಹಲ್ಲೆ), 498ಎ (ಕೌಟುಂಬಿಕ ದೌರ್ಜನ್ಯ) ಅಡಿ ಪ್ರಕರಣ ದಾಖಲಿಸಲಾಗಿತ್ತು.11ದಿನಗಳ ನಂತರ ಸ್ಯಾಂಟ್ರೋ ರವಿ ಬಂಧಿಸುವಲ್ಲಿ ಮೈಸೂರು ಪೋಲಿಸರು ಯಶಸ್ವಿಯಾಗಿದ್ದಾರೆ.