ಸಂಭ್ರಮ ಸಡಗರದಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ

ನಂದಿನಿ ಮೈಸೂರು

ಸಂಭ್ರಮದ ಶ್ರೀನಿವಾಸ ಕಲ್ಯಾಣೋತ್ಸವ

ದೇವರಿಗೆ ಸ್ವರ್ಣಲೇಪಿತ ಕವಚ ಸಮರ್ಪಣೆ
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ಚಾಮುಂಡಿ ಟೌನ್‌ಶಿಪ್‌ನಲ್ಲಿರುವ ಶ್ರೀ ಶ್ರೀನಿವಾಸ ಪೆರುಮಾಳ್ ದೇವಸ್ಥಾನದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಸಂಭ್ರಮದ ಶ್ರೀನಿವಾಸ ಕಲ್ಯಾಣೋತ್ಸವ ಜರುಗಿತು.
ಬೆಳಗ್ಗೆ ಪ್ರೊ.ಡಾ.ಭಾಷ್ಯಂ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಕಲ್ಯಾಣೋತ್ಸವದಲ್ಲಿ ವಿವಿಧ ವಿಶೇಷ ಪೂಜಾ ಕೈಂಕರ್ಯಗಳು ನಡೆಯಿತು.


ಇದೇ ವೇಳೆ ಟೌನ್‌ಶಿಪ್ ಹಾಗೂ ದುರ್ಗಾ ಏಜೆನ್ಸಿ ಮುಖ್ಯಸ್ಥರಾದ ತಿರುಮಲೈಸ್ವಾಮಿ ತಂಬು ಅವರು, ದೇವರಿಗೆ ಸ್ವರ್ಣಲೇಪಿತ ಕವಚವನ್ನು ಕೊಡುಗೆಯಾಗಿ ಸಮರ್ಪಿಸಿ, ಕುಟುಂಬ ಸಮೇತ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಅಲ್ಲದೇ ನೂರಾರು ಭಕ್ತರು ಕಲ್ಯಾಣೋತ್ಸವನ್ನು ಕಣ್ತುಂಬಿಕೊಂಡು ದೇವರ ಕೃಪೆಗೆ ಪಾತ್ರರಾದರು. ಪೂಜೆಯಲ್ಲಿ ಪಾಲ್ಗೊಂಡ ಭಕ್ತಾದಿಗಳಿಗೆ ದೇವಾಲಯದಲ್ಲಿ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.

ದೇವಾಲಯದ ಎನ್.ಶ್ರೀನಿವಾಸನ್ ಅವರು ಸೇರಿದಂತೆ ಇನ್ನಿತರರು ಈ ವೇಳೆ ಉಪಸ್ಥಿತರಿದ್ದು, ಕಲ್ಯಾಣೋತ್ಸವದ ಸಕಲ ಸಿದ್ದತೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

Leave a Reply

Your email address will not be published. Required fields are marked *