ತಂಬಾಕು ಹರಾಜು ದರ ಕುಸಿತ ರೈತರ ಆಕ್ರೋಶ ಪೋಲಿಸರಿಂದ ಲಾಠಿ ಜಾರ್ಜ್

ಸತೀಶ್ ಆರಾಧ್ಯ / ನಂದಿನಿ ಮೈಸೂರು

ಪಿರಿಯಾಪಟ್ಟಣ: ತಂಬಾಕು ಹರಾಜು ಮಾರುಕಟ್ಟೆಯಲ್ಲಿ ದರ ಕುಸಿತ ಹಿನ್ನೆಲೆ ಆಕ್ರೋಶಗೊಂಡ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾನಿರತನ್ನು ಚದುರಿಸಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆ ಬಳಿ ನಡೆಯಿತು.

ತಂಬಾಕು ಹರಾಜು ಮಾರುಕಟ್ಟೆ ಪ್ರಾರಂಭವಾದ ಅ.10 ನೇ ತಾರೀಕು ತಂಬಾಕು ಮಾರುಕಟ್ಟೆ ಪ್ರಾರಂಭವಾದ ಮೊದಲ ದಿನ ಉತ್ತಮ ಗುಣಮಟ್ಟದ ತಂಬಾಕಿಗೆ ಕೆಜಿಗೆ ರೂ.200 ದರ ಸಿಕ್ಕಿದ್ದು ಪ್ರತಿನಿತ್ಯ ದರದಲ್ಲಿ ಏರಿಕೆಯಾಗುತ್ತಿದ್ದು ಅ.18 ರಂದು ಗರಿಷ್ಠ ರೂ.260 ರ ಗಡಿ ದಾಟಿತ್ತು ಇದರಿಂದ ತಂಬಾಕು ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು ಆದರೆ ಅ.19 ರಂದು ಮಾರುಕಟ್ಟೆ ಪ್ರಾರಂಭವಾದಾಗ ಒಂದೇ ಬಾರಿಗೆ ದರ ಕುಸಿತವಾಗಿ ಕೆಜಿಗೆ ರೂ.231 ತಲುಪಿದಾಗ ನೊಂದ ರೈತರು ಮಂಡಳಿ ಅಧಿಕಾರಿಗಳು ಹಾಗೂ ಖರೀದಿದಾರ ಕಂಪೆನಿಗಳ ವಿರುದ್ಧ ಅಸಮಧಾನ  ವ್ಯಕ್ತಪಡಿಸಿದಾಗ ಸ್ಥಳಕ್ಕಾಗಮಿಸಿದ ತಂಬಾಕು ಮಂಡಳಿ ಅಧಿಕಾರಿಗಳು ರೈತರನ್ನು ಮನವೊಲಿಸಲು ಮುಂದಾದರೂ ಜಗ್ಗದ ರೈತರು ಮಾತಿನ ವಾಗ್ವಾದ ಮುಂದುವರಿಸಿದಾಗ ಗೊಂದಲದ ವಾತಾವರಣದಿಂದಾಗಿ ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಲಾಯಿತು ಇದರಿಂದ  ಆಕ್ರೋಶಗೊಂಡ ರೈತರು ಹರಾಜು ಮಾರುಕಟ್ಟೆ ಮುಂಭಾಗದ ಬೆಟ್ಟದಪುರ-ಪಿರಿಯಾಪಟ್ಟಣ ಹೆದ್ದಾರಿಯಲ್ಲಿ ಕುಳಿತು ಏಕಾಏಕಿ ಪ್ರತಿಭಟನೆಗೆ ಮುಂದಾದರು, ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಾ ನಿರತರ ಮನವೊಲಿಸಲು ಮುಂದಾದರು ರೈತರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ಮುಂದುವರಿಸಿದಾಗ ಹೆದ್ದಾರಿಯ ಎರಡೂ ಬದಿಗಳಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತು ಸಂಚಾರ ಅಸ್ತವ್ಯಸ್ತವಾದ ಹಿನ್ನೆಲೆ ವಾಹನ ಸವಾರರು ಬೇಸತ್ತು ಬೇರೆ ಮಾರ್ಗಗಳಲ್ಲಿ  ಬಳಸಿಕೊಂಡು ಸಂಚರಿಸಿದರು, ಈ ವೇಳೆ ಸ್ಥಳಕ್ಕಾಗಮಿಸಿದ ಇನ್ಸ್ ಪೆಕ್ಟರ್ ಜಗದೀಶ್ ಅವರು ಪ್ರತಿಭಟನಾ ನಿರತರಿಗೆ ಮೈಕ್ ಮೂಲಕ ಎಚ್ಚರಿಕೆ ನೀಡಿ ರಸ್ತೆ ತಡೆ ಮಾಡಿ ಪ್ರತಿಭಟಿಸುವುದು ಬೇಡ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ ರಸ್ತೆ ತಡೆ ಕೈ ಬಿಟ್ಟು ಮಂಡಳಿ ಆವರಣದಲ್ಲಿ ಪ್ರತಿಭಟನೆಗೆ ಅವಕಾಶ ನೀಡುತ್ತೇವೆ ಎಂದು ತಿಳಿ ಹೇಳಿದರು ಪ್ರತಿಭಟನಾ ನಿರತರು ಜಗ್ಗದ ಕಾರಣ ಲಾಠಿ ಚಾರ್ಜ್ ನಡೆಸಿ ರೈತ ಮುಖಂಡ ಶ್ರೀನಿವಾಸ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು, ಈ ವೇಳೆ ಕೆಲ ರೈತರು ಪೊಲೀಸರ ನಡೆಗೆ ಖಂಡನೆ ವ್ಯಕ್ತಪಡಿಸಿದರು ಪ್ರತಿಭಟನೆ ಮಾಡುವುದಿದ್ದರೆ ಅನುಮತಿ ಪಡೆದು ತಂಬಾಕು ಮಂಡಳಿ ಆವರಣದಲ್ಲಿ ಮಾಡಿ ರಸ್ತೆ ತಡೆಯನಲ್ಲ ಎಂದು ಪೊಲೀಸರು ಹೇಳಿದಾಗ ಸುಮ್ಮನಾದರು.

ಪ್ರತಿಭಟನೆ ವಿಷಯ ತಿಳಿದು ತಂಬಾಕು ಮಂಡಳಿ ಉಪಾಧ್ಯಕ್ಷ ಎಚ್.ಸಿ ಬಸವರಾಜು, ಮಾಜಿ ಶಾಸಕ ಕೆ.ವೆಂಕಟೇಶ್ ಮುಖಂಡರಾದ ಕೌಲನಹಳ್ಳಿ ಸೋಮಶೇಖರ್, ತಂಬಾಕು ಮಂಡಳಿ ಸದಸ್ಯ ವಿಕ್ರಂ ರಾಜ್ ಮತ್ತಿತರರು ತಂಬಾಕು ಮಂಡಳಿ ಅಧಿಕಾರಿಗಳು ಹಾಗೂ ಖರೀದಿದಾರ ಕಂಪನಿಗಳು ಮತ್ತು ರೈತ ಮುಖಂಡರ ಸಭೆ ನಡೆಸಿ ಗುರುವಾರದ ಮಾರುಕಟ್ಟೆಯಲ್ಲಿ ರೈತರಿಗೆ ಉತ್ತಮ ಬೆಲೆ ನಿಗದಿಪಡಿಸುವ ಭರವಸೆ ನೀಡಿದರು.

ಈ ವೇಳೆ ತಂಬಾಕು ಮಂಡಳಿ ಉಪಾಧ್ಯಕ್ಷ 

ಎಚ್.ಸಿ ಬಸವರಾಜು ಅವರು ಪತ್ರಿಕೆಯೊಂದಿಗೆ ಮಾತನಾಡಿ ಮಂಡಳಿ ಅಧಿಕಾರಿಗಳು ಖರೀದಿದಾರ ಕಂಪೆನಿಗಳೊಂದಿಗೆ ಈಗಾಗಲೇ ಸಭೆ ನಡೆಸಿ ತಂಬಾಕು ರೈತರಿಗೆ ತೊಂದರೆಯಾಗದಂತೆ ಉತ್ತಮ ಸರಾಸರಿ ದರ ಕಾಯ್ದಿರಿಸಿಕೊಳ್ಳಲು ಸೂಚಿಸಿದ್ದರು ಬುಧವಾರ ಏಕಾಏಕಿ ಬೆಲೆ ಕುಸಿತವಾಗಿರುವುದು ಖಂಡನೀಯ ಇದರಿಂದಾಗಿ ರೈತರಿಗೆ ತೊಂದರೆಯಾಗುವ ಬಗ್ಗೆ ತಂಬಾಕು ಮಂಡಳಿ ಅಧ್ಯಕ್ಷರು ಹಾಗೂ ಖರೀದಿದಾರ ಮುಖ್ಯಸ್ಥರುಗಳಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದು ಮುಂದಿನ ದಿನಗಳಲ್ಲಿ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಉತ್ತಮ ಸರಾಸರಿ ದರ ದೊರಕಿಸಿಕೊಡುವ ಭರವಸೆ ನೀಡಿದರು.

Leave a Reply

Your email address will not be published. Required fields are marked *