ಮಾನಸಿಕ ಕಾಯಿಲೆ, ವಿಕಲಚೇತನರಿಗೆ ಕಾನೂನು ಅರಿವು, ಆರೋಗ್ಯ ಸೇವಾ ಸೌಲಭ್ಯ ಬಗ್ಗೆ ಅರಿವು

ಎಚ್.ಡಿ.ಕೋಟೆ:10 ನವೆಂಬರ್ 2021

ನಂದಿನಿ 

ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಎಚ್ ಡಿ ಕೋಟೆ ತಾಲೂಕು ವಿಕಲಚೇತನರ ಹಾಗೂ ಸಬಲೀಕರಣ ಇಲಾಖೆ ಇವರ ಸಹಯೋಗದೊಂದಿಗೆ ಮಾನಸಿಕ ಕಾಯಿಲೆ ಇರುವ ಹಾಗೂ ವಿಕಲಚೇತನರಿಗೆ ಕಾನೂನು ಅರಿವು ಮತ್ತು ಆರೋಗ್ಯ ಸೇವಾ ಸೌಲಭ್ಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ವನ್ನೂ ಏರ್ಪಡಿಸಲಾಗಿತ್ತು.

ಎಚ್ ಡಿ ಕೋಟೆ ತಾಲೂಕಿನ ಚಿಕ್ಕೆರೇಯೂರು , ಗ್ರಾಮ ಪಂಚಾಯತಿಯಲ್ಲಿ ನಡೆದ
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಗಳಾದ ಡಾ” ಟಿ. ರವಿಕುಮಾರ್ ರವರು ಮಾತನಾಡಿ ಮಾನಸಿಕ ಕಾಯಿಲೆ ಇರುವವರಿಗೆ ಹಾಗೂ ವಿಕಲಚೇತನರಿಗೆ ನಮ್ಮ ತಾಲೂಕಿನಲ್ಲಿ ಸುಮಾರು 4500ಜನ ವಿಕಲಚೇತನರ ಇದ್ದಾರೆ, ಚಿಕ್ಕೆರೆಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 55 ಜನ ವಿಕಲಚೇತನರು ಇದ್ದಾರೆ ಎಲ್ಲಾರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಿ ಹಾಗೂ ಪ್ರತಿಯೊಬ್ಬ ವಿಕಲಚೇತನರು ಐಡಿ ಕಾರ್ಡ್ ಗಳನ್ನು ತಪ್ಪದೆ ಪಡೆದುಕೊಳ್ಳಿ.ವಿಕಲಚೇತನರು ಆರೋಗ್ಯ ಕಾರ್ಡ್ ನ್ನು ಪಡೆದು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ,ಪ್ರತಿ 2ನೇ ಶುಕ್ರವಾರ ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಗೆ ಮನೋರೋಗ ತಜ್ಞರು ಬರುತ್ತಾರೆ. ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಉಚಿತವಾದ ಔಷಧಿ ಗಳನ್ನು ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಜೀವಿಕ ಸಂಸ್ಥೆಯ ಉಮೇಶ್ ಹಾಗೂ ವಿಕಲಚೇತನರ ತಾಲೂಕು ಸಂಯೋಜಕರಾದ ಮಹಾದೇವಯ್ಯ ಜಿಲ್ಲಾ ಮಟ್ಟದಮನೋರೋಗ ತಜ್ಞರು ರದ ಡಾ”ಭರತ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶೈಲಜ. ತಾಲೂಕ್ ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಕರು ನಾಗೇಂದ್ರ, ರವಿರಾಜ್, ಜಿಲ್ಲಾ ಮಟ್ಟದ ಸಿಬ್ಬಂದಿವರ್ಗದವರು, ಪಂಚಾಯತಿ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು, ಮಾನಸಿಕ ಕಾಯಿಲೆ ಮತ್ತು ವಿಕಲಚೇತನರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *